Sunday, November 27, 2011

ವೇತನ ತಾರತಮ್ಯ: ತರಗತಿ ಬಹಿಷ್ಕರಿಸಲು ನಿರ್ಧಾರ !

ಬೆಂಗಳೂರು: ವೇತನ ತಾರತಮ್ಯ ಸರಿಪಡಿಸದ ಸರ್ಕಾರದ ಧೋರಣೆಯನ್ನು ಖಂಡಿಸಿ ಡಿಸೆಂಬರ್ 8ರಿಂದ ಅನಿರ್ದಿಷ್ಟ ಕಾಲ ತರಗತಿಗಳನ್ನು ಬಹಿಷ್ಕರಿಸಲು ಪದವಿಪೂರ್ವ ಕಾಲೇಜು ಉಪನ್ಯಾಸಕರು ತೀರ್ಮಾನಿಸಿದ್ದಾರೆ.

ಶಾಸಕರ ಭವನದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪ್ರಾಂಶುಪಾಲರ ಸಂಘ ಮತ್ತು ಸಮನ್ವಯ ಸಮಿತಿಯ ಪದಾಧಿಕಾರಿಗಳು, ಉಪನ್ಯಾಸಕರ ಸಭೆಯಲ್ಲಿ ರಾಜ್ಯದಾದ್ಯಂತ ತರಗತಿಗಳನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ.

ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ಉಪನ್ಯಾಸಕರ ವೇತನದ ನಡುವೆ ತಾರತಮ್ಯ ಇದೆ. ಇದನ್ನು ಸರಿಪಡಿಸುವಂತೆ ಒಂದು ವರ್ಷದಿಂದ ಮನವಿ ಮಾಡುತ್ತಿದ್ದರೂ, ಸರ್ಕಾರ ಸ್ಪಂದಿಸದ ಕಾರಣ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಕಾರ್ಯಾಧ್ಯಕ್ಷ ಎಚ್.ಎಸ್.ಪ್ರಕಾಶ್, ಕಾರ್ಯದರ್ಶಿ ಶಕೀಲ್ ಅಹ್ಮದ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ, ವಿಟಿಯು ಸಿಂಡಿಕೇಟ್ ಸದಸ್ಯ ಎನ್.ಅಪ್ಪಾಜಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಮೂಲ ವೇತನ 11,400 ರೂಪಾಯಿ ಇದ್ದರೆ, ಪದವಿ ಕಾಲೇಜು ಉಪನ್ಯಾಸಕರ ಮೂಲ ವೇತನ 21,600 ರೂಪಾಯಿ ಇದೆ. ಈ ತಾರತಮ್ಯವನ್ನು ಕೂಡಲೇ ಸರಿಪಡಿಸುವಂತೆ ಅವರು ಆಗ್ರಹಿಸಿದ್ದಾರೆ.

Prajavani Dialy, dated 28.11.2011

Please click on the thread to read it http://www.prajavani.net/web/include/story.php?news=52370&section=3&menuid=10

No comments:

Post a Comment